- 1 ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
- 2 ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
- 3 ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
- 4 ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
- 5 ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
- 6 ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
- 7 ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
- 8 ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
- 9 ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
- 10 ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
- 11 ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು.
- 12 ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)
- 13 ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು.
- 14 ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
- 15 ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
- 16 ಜನಸಮೂಹವು ಸುತ್ತಮುತ್ತಲಿನ ಪಟ್ಟಣ ಗಳಿಂದ ರೋಗಿಗಳನ್ನೂ ಅಶುದ್ಧಾತ್ಮಗಳಿಂದ ಪೀಡಿಸಲ್ಪಟ್ಟ ವರನ್ನೂ ತೆಗೆದುಕೊಂಡು ಯೆರೂಸಲೇಮಿಗೆ ಬಂದರು ಮತ್ತು ಅವರಲ್ಲಿ ಪ್ರತಿಯೊಬ್ಬನೂ ಗುಣಹೊಂದಿದನು.
- 17 ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
- 18 ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
- 19 ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- 20 ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
- 21 ಅವರು ಅದನ್ನು ಕೇಳಿದವರಾಗಿ ಬೆಳಗಿನ ಜಾವದಲ್ಲಿಯೇ ದೇವಾಲಯದೊಳಕ್ಕೆ ಪ್ರವೇಶಿಸಿ ಬೋಧಿಸಿದರು. ಇತ್ತ ಮಹಾಯಾಜಕನೂ ಅವನ ಕೂಡ ಇದ್ದವರೂ ಬಂದು ಆಲೋಚನಾ ಸಭೆಯನ್ನೂ ಇಸ್ರಾಯೇಲ್ ಮಕ್ಕಳ ಶಾಸನ ಸಭೆಯನ್ನೂ ಕೂಡಿಸಿ ಅಪೊಸ್ತಲರನ್ನು ಕರತರುವದಕ್ಕಾಗಿ ಸೆರೆ ಮನೆಗೆ ಕಳುಹಿಸಿದರು
- 22 ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ--
- 23 ನಿಜವಾಗಿಯೂ ಸೆರೆಮನೆಯು ಎಲ್ಲಾ ಭದ್ರತೆಯಿಂದ ಮುಚ್ಚಲ್ಪಟ್ಟದ್ದನ್ನೂ ಕಾವಲುಗಾರರು ಬಾಗಲುಗಳಲ್ಲಿ ನಿಂತಿರುವದನ್ನೂ ನಾವು ಕಂಡೆವು; ಆದರೆ ಅದನ್ನು ತೆರೆದಾಗ ನಾವು ಯಾರನ್ನೂ ಒಳಗೆ ಕಾಣಲಿಲ್ಲ ಎಂದು ಹೇಳಿದರು.
- 24 ಆಗ ಮಹಾಯಾಜಕನೂ ದೇವಾಲಯದ ಅಧಿಪತಿಯೂ ಪ್ರಧಾನಯಾಜಕರೂ ಇವುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತು ಎಂದು ಅವರ ವಿಷಯದಲ್ಲಿ ಸಂದೇಹಪಟ್ಟರು.
- 25 ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.
- 26 ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
- 27 ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
- 28 ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- 29 ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- 30 ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
- 31 ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
- 32 ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
- 33 ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
- 34 ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
- 35 ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
- 36 ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
- 37 ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
- 38 ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
- 39 ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
- 40 ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- 41 ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.
- 42 ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
Acts 05
- Details
- Parent Category: New Testament
- Category: Acts
ಅಪೊಸ್ತಲರ ಕೃತ್ಯಗ ಅಧ್ಯಾಯ 5