- 1 ಆಗ ಮಹಾಯಾಜಕನು--ಈ ವಿಷಯ ಗಳು ಹೌದೋ ಎಂದು ಕೇಳಿದನು.
- 2 ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
- 3 ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.
- 4 ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.
- 5 ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
- 6 ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
- 7 ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು. ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ.
- 8 ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
- 9 ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
- 10 ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- 11 ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.
- 12 ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.
- 13 ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
- 14 ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
- 15 ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.
- 16 ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
- 17 ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ
- 18 ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು.
- 19 ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.
- 20 ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
- 21 ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
- 22 ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
- 23 ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.
- 24 ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.
- 25 ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
- 26 ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
- 27 ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
- 28 ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು.
- 29 ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.
- 30 ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
- 31 ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು.
- 32 ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
- 33 ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.
- 34 ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
- 35 ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
- 36 ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
- 37 ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
- 38 ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
- 39 ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
- 40 ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
- 41 ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಸ್ವಂತ ಕೈಗಳಿಂದ ಮಾಡಿದ ಕೆಲಸಗಳಲ್ಲಿ ಉಲ್ಲಾಸಪಟ್ಟರು.
- 42 ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
- 43 ಹೌದು, ನೀವು ಪೂಜಿಸಬೇಕೆಂದು ಮಾಡಿಕೊಂಡ ಮೂರ್ತಿಗಳನ್ನು ಅಂದರೆ ಮೊಲೋಖನ ಗುಡಾರವನ್ನು ರೊಂಫಾ ದೇವತೆಯ ನಕ್ಷತ್ರವನ್ನೂ ಹೊತ್ತುಕೊಂಡು ಹೋದಿರಿ. ಆದದರಿಂದ ನಾನು ನಿಮ್ಮನ್ನು ಬಾಬೆಲಿನ ಆಚೆಗೆ ಅಟ್ಟಿಬಿಡುವೆನು ಎಂಬದು.
- 44 ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
- 45 ತರುವಾಯ ಬಂದ ನಮ್ಮ ಪಿತೃಗಳು ಸಹ ತಮ್ಮ ಮುಂದೆ ದೇವರು ಹೊರಡಿಸಿದ ಅನ್ಯಜನಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಂಡಾಗ ಯೆಹೋಶುವನ ಕೂಡ ಆ ಗುಡಾರವನ್ನು ತಂದರು. ಅದು ದಾವೀದನ ಕಾಲದ ವರೆಗೂ ಅಲ್ಲೇ ಇತ್ತು.
- 46 ದಾವೀದನು ದೇವರ ಸನ್ನಿಧಾನದಲ್ಲಿ ದಯೆ ಹೊಂದಿ ಯಾಕೋಬನ ದೇವರಿಗೋಸ್ಕರ ಆಲಯ ವನ್ನು ಕಟ್ಟಬೇಕೆಂದು ಅಪೇಕ್ಷಿಸಿದನು.
- 47 ಆದರೆ ಸೊಲೊಮೋನನು ಆತನಿಗೋಸ್ಕರ ಮನೆಯನ್ನು ಕಟ್ಟಿಸಿದನು.
- 48 ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
- 49 ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
- 50 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.
- 51 ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- 52 ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- 53 ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.
- 54 ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
- 55 ಆದರೆ ಅವನು ಪವಿತ್ರಾತ್ಮಭರಿತನಾಗಿ ಪರಲೋಕ ದೊಳಗೆ ದೃಷ್ಟಿಸಿ ನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು--
- 56 ಆಗೋ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರು ವದನ್ನೂ ನಾನು ನೋಡುತ್ತೇನೆ ಎಂದು ಹೇಳಿದನು.
- 57 ಆದರೆ ಅವರು ಮಹಾಶಬ್ದದಿಂದ ಕೂಗಿ ತಮ್ಮ ಕಿವಿಗಳನ್ನು ಮುಚ್ಚಿಕೊಂಡು ಒಮ್ಮನಸ್ಸಿನಿಂದ ಅವನ ಮೇಲೆ ಬಿದ್ದು
- 58 ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
- 59 ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,
- 60 ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
Acts 07
- Details
- Parent Category: New Testament
- Category: Acts
ಅಪೊಸ್ತಲರ ಕೃತ್ಯಗ ಅಧ್ಯಾಯ 7