- 1 ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
- 2 ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
- 3 ಹೀಗಿರಲಾಗಿ ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ ಅದ್ಭುತಕಾರ್ಯ ಗಳೂ ಆಗುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟದ್ದರಿಂದ ಅವರು ಬಹುಕಾಲ ಅಲ್ಲಿದ್ದು ಆತನಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು.
- 4 ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು. ಕೆಲವರು ಅಪೊಸ್ತಲರ ಪಕ್ಷದವರಾದರು.
- 5 ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ
- 6 ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ
- 7 ಅಲ್ಲಿ ಸುವಾರ್ತೆಯನ್ನು ಸಾರಿದರು.
- 8 ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಲುಸ್ತ್ರದಲ್ಲಿ ಕೂತಿದ್ದನು; ಅವನು ಹುಟ್ಟು ಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.
- 9 ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು;ಪೌಲನು ಅವನನ್ನು ಸ್ಥಿರವಾಗಿ ನೋಡಿ ವಾಸಿಯಾಗು ವದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು--
- 10 ನಿನ್ನ ಕಾಲೂರಿ ನೆಟ್ಟಗೆ ನಿಂತುಕೋ ಎಂದು ಮಹಾಧ್ವನಿಯಿಂದ ಹೇಳಿದನು. ಆ ಮನುಷ್ಯನು ಹಾರಿ ನಡೆದಾಡಿದನು.
- 11 ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.
- 12 ಅವರು ಬಾರ್ನಬನನ್ನು ೃಹಸ್ಪತಿ ಎಂದೂ ಪೌಲನು ಮುಖ್ಯ ಪ್ರಸಂಗಿಯಾಗಿದ್ದರಿಂದ ಬುಧನೆಂದೂ ಕರೆದರು;
- 13 ಆಗ ಅವರ ಪಟ್ಟಣದ ಎದುರಿನಲ್ಲಿದ್ದ ೃಹಸ್ಪತಿಯ ಯಾಜಕನು ಎತ್ತುಗಳನ್ನೂ ಹೂವಿನಹಾರಗಳನ್ನೂ ದ್ವಾರಗಳ ಬಳಿಗೆ ತಂದು ಜನರೊಂದಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು.
- 14 ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ--
- 15 ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ
- 16 ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
- 17 ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
- 18 ಅವರು ಈ ಮಾತುಗಳನ್ನು ಹೇಳಿದರೂ ತಮಗೆ ಬಲಿಕೊಡದಂತೆ ಜನರನ್ನು ತಡೆಯವದು ಕಷ್ಟವಾಗಿತ್ತು.
- 19 ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
- 20 ಆದಾಗ್ಯೂ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಪಟ್ಟಣ ದೊಳಕ್ಕೆ ಬಂದನು. ಮರುದಿನ ಬಾರ್ನಬನ ಜೊತೆ ಯಲ್ಲಿ ದೆರ್ಬೆಗೆ ಹೊರಟನು.
- 21 ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.
- 22 ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- 23 ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
- 24 ತರುವಾಯ ಪಿಸಿದ್ಯವನ್ನು ಹಾದು ಪಂಫುಲ್ಯಕ್ಕೆ ಬಂದು
- 25 ಪೆರ್ಗೆಯಲ್ಲಿ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯಕ್ಕೆ ಇಳಿದು
- 26 ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.
- 27 ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.
- 28 ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
Acts 14
- Details
- Parent Category: New Testament
- Category: Acts
ಅಪೊಸ್ತಲರ ಕೃತ್ಯಗ ಅಧ್ಯಾಯ 14