- 1 ತರುವಾಯ ಅವನು ದೆರ್ಬೆ ಮತ್ತು ಲುಸ್ತ್ರಕ್ಕೆ ಬಂದನು; ಅಲ್ಲಿ ಇಗೋ, ನಂಬಿಕೊಂಡಿದ್ದ ಯೆಹೂದ್ಯ ಸ್ತ್ರೀಯ ಮಗನಾದ ತಿಮೊಥೆಯನೆಂಬ ಹೆಸರುಳ್ಳ ಒಬ್ಬ ಶಿಷ್ಯನಿದ್ದನು. ಅವನ ತಂದೆಯು ಗ್ರೀಕನು.
- 2 ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.
- 3 ಇವನನ್ನು ತನ್ನ ಸಂಗಡ ಕರಕೊಂಡು ಹೋಗಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.
- 4 ಅವರು ಪಟ್ಟಣಗಳಲ್ಲಿ ಸಂಚಾರ ಮಾಡುತ್ತಾ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಂದಲೂ ಹಿರಿಯ ರಿಂದಲೂ ನೇಮಿಸಲ್ಪಟ್ಟ ವಿಧಿಗಳನ್ನು ಅನುಸರಿಸುವಂತೆ ಅವರಿಗೆ ಒಪ್ಪಿಸಿದರು.
- 5 ಹೀಗೆ ಸಭೆಗಳು ವಿಶ್ವಾಸದಲ್ಲಿ ಸ್ಥಿರಗೊಂಡು ಸಂಖ್ಯೆಯಲ್ಲಿ ದಿನಾಲು ಹೆಚ್ಚುತ್ತಿದ್ದವು.
- 6 ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
- 7 ಅವರು ಮುಸ್ಯಕ್ಕೆ ಬಂದು ಬಿಥೂನ್ಯಕ್ಕೆ ಹೋಗಲು ಪ್ರಯತ್ನ ಮಾಡಿದರು. ಆದರೆ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
- 8 ಹೀಗೆ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.
- 9 ಆಗ ರಾತ್ರಿ ಕಾಲದಲ್ಲಿ ಪೌಲನಿಗೆ ಒಂದು ದರ್ಶನವಾಯಿತು; ಏನಂ ದರೆ--ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು--ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕು ಎಂದು ಅವನನ್ನು ಬೇಡಿಕೊಂಡನು.
- 10 ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.
- 11 ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.
- 12 ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
- 13 ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.
- 14 ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
- 15 ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು.
- 16 ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು.
- 17 ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- 18 ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
- 19 ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
- 20 ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ.
- 21 ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
- 22 ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.
- 23 ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
- 24 ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
- 25 ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
- 26 ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
- 27 ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.
- 28 ಆದರೆ ಪೌಲನು ಮಹಾಧ್ವನಿಯಿಂದ ಕೂಗಿ ಅವನಿಗೆ--ನೀನೇನೂ ಕೇಡು ಮಾಡಿಕೊಳ್ಳಬೇಡ; ನಾವೆಲ್ಲರೂ ಇಲ್ಲೇ ಇದ್ದೇವೆ ಎಂದು ಹೇಳಿದನು.
- 29 ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
- 30 ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
- 31 ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.
- 32 ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ಅವರು ಕರ್ತನ ವಾಕ್ಯವನ್ನು ತಿಳಿಸಿದರು.
- 33 ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
- 34 ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿ ತನ್ನ ಮನೆಯವರೆಲ್ಲರ ಸಂಗಡ ದೇವರಲ್ಲಿ ನಂಬಿಕೆಯಿಟ್ಟು ಉಲ್ಲಾಸಗೊಂಡನು.
- 35 ಬೆಳಗಾದ ಮೇಲೆ ನ್ಯಾಯಾಧಿಪತಿಗಳು--ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಸಿಪಾಯಿಗಳ ಮೂಲಕ ಹೇಳಿಕಳುಹಿಸಿದರು.
- 36 ಸೆರೆಯ ಅಧಿ ಕಾರಿಯು ಈ ಮಾತನ್ನು ಪೌಲನಿಗೆ ತಿಳಿಸಿ--ನ್ಯಾಯಾ ಧಿಪತಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಕಳುಹಿಸಿ ದ್ದಾರೆ, ಆದದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ ಎಂದು ಹೇಳಿದನು.
- 37 ಅದಕ್ಕೆ ಪೌಲನು--ಅವರು ವಿಚಾರಣೆ ಮಾಡದೆ ರೋಮ ನ್ನರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆ ಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರಕೊಂಡು ಹೋಗಲಿ ಎಂದು ಹೇಳಿ
- 38 ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು.
- 39 ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.
- 40 ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
Acts 16
- Details
- Parent Category: New Testament
- Category: Acts
ಅಪೊಸ್ತಲರ ಕೃತ್ಯಗ ಅಧ್ಯಾಯ 16