- 1 ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
- 2 ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.
- 3 ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು.
- 4 ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
- 5 ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;
- 6 ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;
- 7 ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ.
- 8 ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ.
- 9 ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.
- 10 ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು.
- 11 ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು.
- 12 ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
- 13 ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
- 14 ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
- 15 ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ;
- 16 ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
- 17 ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- 18 ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.
- 19 ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
- 20 ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು.
- 21 ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ
- 22 ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- 23 ನಮ್ಮ ನಂಬಿಕೆಯಿಂದಾದ ಅರಿಕೆಯನ್ನು ನಿಶ್ಚಂಚಲ ದಿಂದ ಬಲವಾಗಿ ಹಿಡಿಯೋಣ. (ಯಾಕಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು).
- 24 ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
- 25 ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
- 26 ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
- 27 ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
- 28 ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
- 29 ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- 30 ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
- 31 ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
- 32 ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
- 33 ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.
- 34 ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
- 35 ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
- 36 ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
- 37 ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- 38 ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.
- 39 ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
Hebrews 10
- Details
- Parent Category: New Testament
- Category: Hebrews
ಇಬ್ರಿಯರಿಗೆ ಅಧ್ಯಾಯ 10