- 1 ಆತನು ಅವರಿಗೆ--ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಬಲದೊಂದಿಗೆ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- 2 ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
- 3 ಮತ್ತು ಆತನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷು ಹಿಮದಂತೆ ಹೆಚ್ಚು ಬೆಳ್ಳಗಾಗಿ ಹೊಳೆಯುತ್ತಿತ್ತು.
- 4 ಆಗ ಅಲ್ಲಿ ಎಲೀಯನು ಮೋಶೆ ಯೊಂದಿಗೆ ಅವರಿಗೆ ಕಾಣಿಸಿಕೊಂಡು ಯೇಸುವಿನೊ ಂದಿಗೆ ಮಾತನಾಡುತ್ತಿದ್ದರು.
- 5 ಆಗ ಪೇತ್ರನು ಯೇಸು ವಿಗೆ-- ಬೋಧಕನೇ, ನಾವು ಇಲ್ಲೆ ಇರುವದು ನಮಗೆ ಒಳ್ಳೇದು; ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ನಾವು ಕಟ್ಟುವೆವು ಎಂದು ಹೇಳಿದನು.
- 6 ಅವನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ; ಯಾಕಂ ದರೆ ಅವರು ಬಹಳವಾಗಿ ಹೆದರಿದ್ದರು.
- 7 ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
- 8 ಕೂಡಲೆ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನು ಹೊರತು ಇನ್ನಾರನ್ನೂ ನೋಡಲಿಲ್ಲ.
- 9 ಅವರು ಬೆಟ್ಟದಿಂದಿಳಿದು ಬರುವಾಗ ಮನುಷ್ಯ ಕುಮಾರನು ಸತ್ತವರೊಳಗಿಂದ ಎದ್ದು ಬರುವ ವರೆಗೆ ತಾವು ಕಂಡವುಗಳನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು.
- 10 ಮತ್ತು ಸತ್ತವರೊಳಗಿಂದ ಎದ್ದು ಬರುವದರ ಅರ್ಥವೇನೆಂದು ಅವರು ಒಬ್ಬರಿಗೊಬ್ಬರು ಪ್ರಶ್ನಿಸಿಕೊಳ್ಳುತ್ತಾ ಆ ಮಾತನ್ನು ತಮ್ಮೊಳಗೆ ಇಟ್ಟುಕೊಂಡರು.
- 11 ಇದಲ್ಲದೆ ಅವರು ಆತನಿಗೆ--ಎಲೀಯನು ಮೊದಲು ಬರುವದು ಅಗತ್ಯವೆಂದು ಶಾಸ್ತ್ರಿಗಳು ಯಾಕೆ ಹೇಳುತ್ತಾರೆ ಎಂದು ಕೇಳಿದರು.
- 12 ಆತನು ಅವರಿಗೆ ಪ್ರತ್ಯುತ್ತರವಾಗಿ-- ನಿಜವಾಗಿಯೂ ಎಲೀಯನು ಮೊದಲು ಬಂದು ಎಲ್ಲವುಗಳನ್ನು ಯಥಾಸ್ಥಾನಪಡಿಸುತ್ತಾನೆ; ಆದರೆ ಮನುಷ್ಯಕುಮಾರನು ಬಹಳ ಶ್ರಮೆಗಳನ್ನನುಭವಿ ಸುವದು ಮತ್ತು ತಿರಸ್ಕರಿಸಲ್ಪಡುವದು ಅಗತ್ಯವೆಂದು ಆತನ ವಿಷಯವಾಗಿ ಬರೆದಿರುವದು ಹೇಗೆ?
- 13 ಆದರೆ ನಾನು ನಿಮಗೆ ಹೇಳುವದೇನಂದರೆ-- ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಅವರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಅಂದನು.
- 14 ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರ ಸುತ್ತಲೂ ದೊಡ್ಡ ಸಮೂಹವನ್ನೂ ಶಾಸ್ತ್ರಿಗಳು ಅವರೊಂದಿಗೆ ತರ್ಕಿಸುತ್ತಿರುವದನ್ನೂ ಕಂಡನು.
- 15 ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
- 16 ಆಗ ಆತನು ಶಾಸ್ತ್ರಿಗಳಿಗೆ-- ಅವರೊಂದಿಗೆ ನೀವು ಏನು ತರ್ಕಮಾಡುತ್ತೀರಿ ಎಂದು ಕೇಳಿದನು.
- 17 ಆಗ ಸಮೂಹದಲ್ಲಿ ಒಬ್ಬನು ಪ್ರತ್ಯುತ್ತರವಾಗಿ--ಬೋಧಕನೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತಕ್ಕೊಂಡು ಬಂದೆನು.
- 18 ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
- 19 ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- 20 ಆಗ ಅವರು ಅವನನ್ನು ಆತನ ಬಳಿಗೆ ತಂದರು; ಅವನು ಆತನನ್ನು ನೋಡಿದ ತಕ್ಷಣವೇ ಆ ಆತ್ಮವು ಅವನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಸುರಿಸುತ್ತಾ ಹೊರಳಾಡಿದನು.
- 21 ಆತನು ಅವನ ತಂದೆಗೆ--ಇದು ಅವನನ್ನು ಹಿಡಿದು ಎಷ್ಟು ಕಾಲವಾಯಿತು ಎಂದು ಕೇಳಲು ಅವನು-- ಬಾಲ್ಯದಿಂದಲೇ;
- 22 ಅದು ಅವನನ್ನು ನಾಶಪಡಿಸಲು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು; ಆದರೆ ನೀನು ಏನಾದರೂ ಮಾಡಲು ಸಾಧ್ಯ ವಿದ್ದರೆ ನಮ್ಮ ಮೇಲೆ ಕರುಣೆಯಿಟ್ಟು ನಮಗೆ ಸಹಾಯ ಮಾಡು ಅಂದನು.
- 23 ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- 24 ತಕ್ಷಣವೇ ಮಗುವಿನ ತಂದೆಯು--ಕರ್ತನೇ, ನಾನು ನಂಬು ತ್ತೇನೆ; ನನಗೆ ಅಪನಂಬಿಕೆ ಇಲ್ಲದಂತೆ ನೀನು ಸಹಾಯ ಮಾಡು ಎಂದು ಕಣ್ಣೀರಿನಿಂದ ಕೂಗಿ ಹೇಳಿದನು.
- 25 ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
- 26 ಆಗ ಅದು ಕೂಗಿ ಅವನನ್ನು ಬಹಳವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂತು; ಮತ್ತು ಅವನು ಸತ್ತವನ ಹಾಗೆ ಬಿದ್ದದರಿಂದ ಅನೇಕರು--ಅವನು ಸತ್ತಿದ್ದಾನೆ ಅಂದರು.
- 27 ಆದರೆ ಯೇಸು ಕೈ ಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದನು.
- 28 ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.
- 29 ಆತನು ಅವರಿಗೆ--ಈ ತರವಾ ದದ್ದು ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವದರಿಂದಲೂ ಹೊರಗೆ ಬರಲಾರದು ಅಂದನು.
- 30 ಅವರು ಅಲ್ಲಿಂದ ಹೊರಟು ಗಲಿಲಾಯವನ್ನು ಹಾದುಹೋಗುತ್ತಿದ್ದರು. ಇದು ಯಾರಿಗೂ ತಿಳಿಯಬಾರದೆಂದು ಆತನಿಗೆ ಮನಸ್ಸಿತ್ತು.
- 31 ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
- 32 ಆದರೆ ಅವರು ಆ ಮಾತನ್ನು ಗ್ರಹಿಸ ಲಿಲ್ಲ, ಮತ್ತು ಆತನನ್ನು ಕೇಳುವದಕ್ಕೂ ಭಯಪಟ್ಟರು.
- 33 ಆತನು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ ಅವರಿಗೆ--ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ ಎಂದು ಕೇಳಿದನು.
- 34 ಆದರೆ ಅವರು ಸುಮ್ಮನಿದ್ದರು; ಯಾಕಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನಾಗಿರಬೇಕೆಂದು ದಾರಿ ಯಲ್ಲಿ ವಾಗ್ವಾದ ಮಾಡಿದ್ದರು.
- 35 ಆಗ ಆತನು ಕೂತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ--ಯಾವನಾದರೂ ಮೊದಲಿನವನಾಗಬೇ ಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯ ವನೂ ಎಲ್ಲರ ಸೇವಕನೂ ಆಗಿರಬೇಕು ಅಂದನು.
- 36 ಆತನು ಒಂದು ಮಗುವನ್ನು ತಕ್ಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ ತನ್ನ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ--
- 37 ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿದರೆ ನನ್ನನ್ನು ಅಂಗೀಕರಿಸುತ್ತಾನೆ; ಮತ್ತು ಯಾವನು ನನ್ನನ್ನು ಅಂಗೀಕರಿಸುವನೋ ಅವನು ನನ್ನನ್ನಲ್ಲದೆ ನನ್ನನ್ನು ಕಳುಹಿಸಿದಾತನನ್ನೇ ಅಂಗೀಕರಿಸುತ್ತಾನೆ ಅಂದನು.
- 38 ಯೋಹಾನನು ಆತನಿಗೆ -- ಬೋಧಕನೇ, ನಮ್ಮನ್ನು ಹಿಂಬಾಲಿಸದವನೊಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನು ನಮ್ಮನ್ನು ಹಿಂಬಾಲಿಸುವವನಲ್ಲವಾದ್ದರಿಂದ ನಾವು ಅವನಿಗೆ ಅಡ್ಡಿಮಾಡಿದೆವು ಎಂದು ಹೇಳಿದನು.
- 39 ಆದರೆ ಯೇಸು--ಅವನಿಗೆ ಅಡ್ಡಿಮಾಡಬೇಡಿರಿ; ಯಾಕಂದರೆ ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿ ನನ್ನ ವಿಷಯದಲ್ಲಿ ಹಗುರಾಗಿ ಕೆಟ್ಟದ್ದನ್ನು ಮಾತನಾಡುವ ಒಬ್ಬನಾದರೂ ಇಲ್ಲ.
- 40 ಯಾಕಂದರೆ ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವ ನಾಗಿದ್ದಾನೆ.
- 41 ಇದಲ್ಲದೆ ನೀವು ಕ್ರಿಸ್ತನಿಗೆ ಸೇರಿದವ ರಾದದರಿಂದ ಯಾವನಾದರೂ ನನ್ನ ಹೆಸರಿನಲ್ಲಿ ನಿಮಗೆ ಒಂದು ತಂಬಿಗೆ ನೀರನ್ನು ಕೊಟ್ಟರೆ ಅವನು ತನ್ನ ಪ್ರತಿ ಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 42 ನನ್ನನ್ನು ನಂಬುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ತೂಗಹಾಕಿ ಅವ ನನ್ನು ಸಮುದ್ರದಲ್ಲಿ ಬಿಸಾಡಿಬಿಡುವದು ಅವನಿಗೆ ಒಳ್ಳೇದು.
- 43 ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು;
- 44 ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- 45 ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು.
- 46 ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- 47 ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು.
- 48 ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- 49 ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.
- 50 ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
Mark 09
- Details
- Parent Category: New Testament
- Category: Mark
ಮಾರ್ಕನು ಅಧ್ಯಾಯ 9