- 1 ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
- 2 ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
- 3 ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- 4 ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- 5 ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- 6 ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
- 7 ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
- 8 ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- 9 ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
- 10 ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ಒಬ್ಬನಿಂದ ಅಂದರೆ ನಮ್ಮ ಪಿತೃವಾದ ಇಸಾಕನಿಂದ ಗರ್ಭಿಣಿಯಾದಾಗ
- 11 (ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
- 12 ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.
- 13 ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.
- 14 ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
- 15 ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
- 16 ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
- 17 ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
- 18 ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
- 19 ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ.
- 20 ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?
- 21 ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
- 22 ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು
- 23 ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
- 24 ಯೆಹೂದ್ಯರೊಳಗಿಂದ ನಮ್ಮನ್ನು ಮಾತ್ರವಲ್ಲದೆ ಅನ್ಯಜನಾಂಗಗಳವರೊ ಳಗಿಂದಲೂ ಆತನು ಕರೆದಿದ್ದರೆ ಏನು?
- 25 ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ.
- 26 ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
- 27 ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
- 28 ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.
- 29 ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
- 30 ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
- 31 ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
- 32 ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.
- 33 ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
Romans 09
- Details
- Parent Category: New Testament
- Category: Romans
ರೋಮಾಪುರದವರಿಗೆ ಅಧ್ಯಾಯ 9