- 1 ಆದರೆ ಸಂದೇಹಾಸ್ಪದವಾದವುಗಳನ್ನು ಚರ್ಚಿಸಬೇಡಿರಿ, ನಂಬಿಕೆಯಲ್ಲಿ ದೃಢವಿಲ್ಲ ದವರನ್ನು ಸೇರಿಸಿಕೊಳ್ಳಿರಿ.
- 2 ಒಬ್ಬನು ಯಾವದನ್ನಾ ದರೂ ತಿನ್ನಬಹುದೆಂದು ನಂಬುತ್ತಾನೆ; ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ;
- 3 ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವ ನನ್ನು ದೋಷಿಯೆಂದು ಎಣಿಸಬಾರದು; ದೇವರೇ ಅವನನ್ನು ಸೇರಿಸಿಕೊಂಡಿದ್ದಾನಲ್ಲಾ.
- 4 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.
- 5 ಒಬ್ಬನು ಒಂದು ದಿವಸಕ್ಕಿಂತ ಮತ್ತೊಂದು ದಿವಸವನ್ನು ವಿಶೇಷವೆಂದು ಎಣಿಸುತ್ತಾನೆ. ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ಒಂದೇ ರೀತಿಯಾಗಿ ಎಣಿಸುತ್ತಾನೆ; ಹೀಗಿರಲಾಗಿ ಪ್ರತಿಯೊಬ್ಬನು ತನ್ನ ಮನಸ್ಸಿ ನಲ್ಲಿ ನಿಶ್ಚಯಿಸಿಕೊಂಡಿರಲಿ.
- 6 ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
- 7 ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
- 8 ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
- 9 ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- 10 ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
- 11 ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
- 12 ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
- 13 ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದ ಲ್ಲೊಬ್ಬರು ಎಂದಿಗೂ ತೀರ್ಪು ಮಾಡದೆ ಇರೋಣ; ಇದಲ್ಲದೆ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡೆತಡೆಯನ್ನಾಗಲಿ ಹಾಕಲೇಬಾರದೆಂದು ತೀರ್ಮಾನಿ ಸಿಕೊಳ್ಳಿರಿ.
- 14 ಯಾವ ಪದಾರ್ಥವೂ ಸ್ವತಃ ಅಶುದ್ಧ ವಾದದ್ದಲ್ಲವೆಂದು ನಾನು ಬಲ್ಲೆನು, ಇದನ್ನು ನಾನು ಕರ್ತನಾದ ಯೇಸುವಿನ ಮುಖಾಂತರ ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವೇ.
- 15 ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
- 16 ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.
- 17 ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- 18 ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- 19 ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
- 20 ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 21 ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- 22 ನಿನಗೆ ನಂಬಿಕೆಯಿದೆಯೋ? ದೇವರ ಸನ್ನಿಧಿಯಲ್ಲಿ ಅದು ನಿನಗೇ ಇರಲಿ. ಒಬ್ಬನು ತಾನು ಒಪ್ಪುವ ವಿಷಯದಲ್ಲಿ ತನ್ನನ್ನು ತಾನು ಖಂಡಿಸಿ ಕೊಳ್ಳದಿದ್ದರೆ ಅವನು ಧನ್ಯನು.
- 23 ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
Romans 14
- Details
- Parent Category: New Testament
- Category: Romans
ರೋಮಾಪುರದವರಿಗೆ ಅಧ್ಯಾಯ 14