- 1 ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.
- 2 ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- 3 ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.
- 4 ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.
- 5 ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
- 6 ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- 7 ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.
- 8 ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
- 9 ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
- 10 ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
- 11 ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
- 12 ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
- 13 ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.
- 14 ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
- 15 ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
- 16 ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
- 17 ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
- 18 ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
- 19 ಇಗೋ, ಕರ್ತನ ಬಿರುಗಾಳಿ ಉಗ್ರವಾಗಿ ಹೊರಟಿದೆ; ಅಘೋರ ವಾದ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣ ವಾಗಿ ಬೀಳುವದು.
- 20 ಆತನು ತನ್ನ ಹೃದಯದ ಅಲೋ ಚನೆಗಳನ್ನು ನಡೆಸಿ ತೀರಿಸುವ ವರೆಗೂ ಕರ್ತನ ಕೋಪವು ತಿರುಗುವದಿಲ್ಲ; ಅಂತ್ಯದಿನಗಳಲ್ಲಿ ಅದನ್ನು ಸಂಪೂರ್ಣವಾಗಿ ಯೋಚನೆ ಮಾಡುವಿರಿ.
- 21 ನಾನು ಪ್ರವಾದಿಗಳನ್ನು ಕಳುಹಿಸಲಿಲ್ಲ, ಆದಾಗ್ಯೂ ಅವರು ಓಡಿದರು; ನಾನು ಅವರ ಸಂಗಡ ಮಾತನಾಡಲಿಲ್ಲ ಆದಾಗ್ಯೂ ಪ್ರವಾದಿಸಿದರು.
- 22 ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
- 23 ಕರ್ತನು ಅನ್ನುತ್ತಾನೆ--ನಾನು ಸವಿಾಪದಲ್ಲಿ ದೇವರಾಗಿದ್ದು ದೂರದಲ್ಲಿ ದೇವರ ಲ್ಲವೋ?
- 24 ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- 25 ನನ್ನ ಹೆಸರಿನಲ್ಲಿ ಸುಳ್ಳನ್ನು ಪ್ರವಾದಿಸುವ ಪ್ರವಾದಿಗಳು ಹೇಳುವದನ್ನು ಕೇಳಿದ್ದೇನೆ. ಅವರು--ನಾನು ಕನಸು ಕಂಡಿದ್ದೇನೆ, ಕನಸು ಕಂಡಿದ್ದೇನೆ ಅನ್ನುತ್ತಾರೆ.
- 26 ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ;
- 27 ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.
- 28 ಕನಸು ಉಂಟಾದ ಪ್ರವಾದಿಯು ಕನಸನ್ನು ತಿಳಿಸಲಿ, ನನ್ನ ವಾಕ್ಯ ಉಂಟಾದವನು ನನ್ನ ವಾಕ್ಯವನ್ನು ನಂಬಿಗಸ್ತನಾಗಿ ಹೇಳಲಿ; ಗೋಧಿಗೂ ಹೊಟ್ಟಿಗೂ ಸಂಬಂಧವೇನೆಂದು ಕರ್ತನು ಅನ್ನುತ್ತಾನೆ.
- 29 ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
- 30 ಆದದರಿಂದ ಇಗೋ, ಪ್ರತಿಯೊಬ್ಬನೂ ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರವಾದಿಗಳಿಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 31 ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- 32 ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- 33 ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
- 34 ಕರ್ತನ ಭಾರವೆಂದೆನ್ನುವ ಪ್ರವಾದಿ ಯಾಗಲಿ ಯಾಜಕನಾಗಲಿ ಜನರಾಗಲಿ ಅವರ ವಿಷಯ ವೇನಂದರೆ--ನಾನು ಅಂಥಾ ಮನುಷ್ಯನನ್ನೂ ಅವನ ಮನೆಯನ್ನೂ ಶಿಕ್ಷಿಸುವೆನು.
- 35 ನೀವು ನಿಮ್ಮ ನಿಮ್ಮ ನೆರೆಯವರಿಗೂ ನಿಮ್ಮ ನಿಮ್ಮ ಸಹೋದರರಿಗೂ--ಕರ್ತನು ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
- 36 ಆದರೆ ಕರ್ತನ ಭಾರವನ್ನು ಇನ್ನು ಎಂದಿಗೂ ನುಡಿಯುವದಿಲ್ಲ; ಒಬ್ಬೊ ಬ್ಬನಿಗೆ ತನ್ನ ನುಡಿಯೇ ಭಾರವಾಗುವದು; ನೀವು ಜೀವವುಳ್ಳ ದೇವರ ವಾಕ್ಯಗಳನ್ನು ಅಂದರೆ ನಮ್ಮ ದೇವರಾದ ಸೈನ್ಯಗಳ ಕರ್ತನ ವಾಕ್ಯಗಳನ್ನೇ ಮಾರ್ಪಡಿ ಸಿದ್ದೀರಿ.
- 37 ನೀನು ಪ್ರವಾದಿಗೆ--ಕರ್ತನು ನಿನಗೆ ಏನು ಉತ್ತರ ಕೊಟ್ಟಿದ್ದಾನೆ? ಕರ್ತನು ಏನು ಹೇಳಿದ್ದಾನೆ ಎಂದು ಹೇಳಬೇಕು.
- 38 ಆದರೆ ನೀವು--ಕರ್ತನ ಭಾರವೆಂದು ಹೇಳುತ್ತಿದ್ದೀರಿ. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಭಾರವೆಂದು ನೀವು ಹೇಳಬಾರದೆಂಬದಾಗಿ ನಾನು ನಿಮಗೆ ಹೇಳಿ ಕಳುಹಿ ಸಿದ ಮೇಲೆ ಕರ್ತನ ಭಾರವೆಂಬ ಈ ಮಾತನ್ನು ನೀವು ಹೇಳುವದರಿಂದ
- 39 ಕರ್ತನು ಹೀಗೆ ಹೇಳು ತ್ತಾನೆ--ನಾನು ಇಗೋ, ನಾನೇ ನಿಮ್ಮನ್ನು ಪೂರ್ಣವಾಗಿ ಮರೆತುಬಿಡುವೆನು; ನಿಮ್ಮನ್ನು ನಿಮಗೂ ನಿಮ್ಮ ತಂದೆ ಗಳಿಗೂ ಕೊಟ್ಟ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತಳ್ಳಿಬಿಡುವೆನು.
- 40 ಮರೆತು ಹೋಗಲಾರದ ನಿತ್ಯವಾದ ನಿಂದೆಯನ್ನೂ ನಿತ್ಯವಾದ ಅವಮಾನವನ್ನೂ ನಿನ್ನ ಮೇಲೆ ಬರಮಾಡುತ್ತೇನೆ.
Jeremiah 23
- Details
- Parent Category: Old Testament
- Category: Jeremiah
ಯೆರೆಮಿಯ ಅಧ್ಯಾಯ 23