- 1 ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
- 2 ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
- 3 ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
- 4 ಐಶ್ವ ರ್ಯವು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳು ತ್ತದೆ; ಬಡವನು ತನ್ನ ನೆರೆಯವನಿಂದ ಪ್ರತ್ಯೇಕಿಸಲ್ಪ ಡುತ್ತಾನೆ.
- 5 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರನು.
- 6 ಅಧಿಪ ತಿಯ ದಯೆಗಾಗಿ ಅನೇಕರು ಬಿನ್ನವಿಸುವರು; ದಾನಗ ಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
- 7 ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
- 8 ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು.
- 9 ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
- 10 ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ.
- 11 ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.
- 12 ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
- 13 ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
- 14 ಮನೆಯೂ ಐಶ್ವರ್ಯವೂ ಪಿತೃಗಳ ಸ್ವಾಸ್ಥ್ಯವು; ವಿವೇಕಿಯಾದ ಹೆಂಡತಿಯು ಕರ್ತ ನಿಂದಲೇ.
- 15 ಮೈಗಳ್ಳತನವು ಗಾಢ ನಿದ್ರೆಯಲ್ಲಿ ಮುಳು ಗಿಸುತ್ತದೆ; ಸೋಮಾರಿಯ ಪ್ರಾಣವು ಹಸಿವೆಗೊಳ್ಳು ವದು.
- 16 ಆಜ್ಞೆಯನ್ನು ಪಾಲಿಸುವವನು ತನ್ನ ಆತ್ಮವನ್ನು ಪಾಲಿಸುತ್ತಾನೆ; ತನ್ನ ಮಾರ್ಗಗಳನ್ನು ಅಸಡ್ಡೆಮಾಡು ವವನು ಸಾಯುವನು.
- 17 ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- 18 ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಅಳುವಿಕೆಗೆ ನೀನು ಕನಿಕರಿಸದೆ ಇರು.
- 19 ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
- 20 ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
- 21 ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- 22 ಮನುಷ್ಯನ ಆಕಾಂಕ್ಷೆಯು ಆತನ ದಯೆಯೇ; ಬಡವನು ಸುಳ್ಳುಗಾರನಿಗಿಂತ ಒಳ್ಳೆಯವನು.
- 23 ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
- 24 ಸೋಮಾರಿಯು ತನ್ನ ಕೈಯನ್ನು ಎದೆಯಲ್ಲಿ ಬಚ್ಚಿಟ್ಟು ತನ್ನ ಬಾಯಿಗೆ ಸಹ ಅದನ್ನು ಎತ್ತುವದಿಲ್ಲ.
- 25 ಪರಿಹಾಸ್ಯಗಾರರನ್ನು ಹೊಡೆದರೆ ಮೂಢರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿ ದರೆ ಅವನು ತಿಳುವಳಿಕೆಯನ್ನು ಗ್ರಹಿಸುವನು.
- 26 ತಂದೆಯನ್ನು ನಷ್ಟಪಡಿಸಿ ತಾಯಿಯನ್ನು ಓಡಿಸುವವನು ನಾಚಿಕೆಯನ್ನುಂಟು ಮಾಡಿ ನಿಂದೆಯನ್ನು ತರುತ್ತಾನೆ.
- 27 ನನ್ನ ಮಗನೇ, ತಿಳುವಳಿಕೆಯ ಮಾತುಗಳಿಂದ ದಾರಿ ತಪ್ಪಿಸುವ ಬೋಧನೆಯನ್ನು ಕೇಳದಿರು.
- 28 ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.
- 29 ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
Proverbs 19
- Details
- Parent Category: Old Testament
- Category: Proverbs
ಙ್ಞಾನೋಕ್ತಿಗಳು ಅಧ್ಯಾಯ 19