- 1 ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆಪಡದಿರು; ಇಲ್ಲವೆ ಅವರ ಸಂಗಡ ಇರುವದಕ್ಕೆ ಅಪೇಕ್ಷಿಸಬೇಡ;
- 2 ಅವರ ಹೃದಯವು ನಾಶನವನ್ನು ಅಭ್ಯಾಸಿಸುತ್ತದೆ; ಅವರ ತುಟಿಗಳು ಹಾನಿ ಯನ್ನು ಪ್ರಸ್ತಾಪಿಸುತ್ತವೆ.
- 3 ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
- 4 ತಿಳುವಳಿಕೆಯಿಂದ ಎಲ್ಲಾ ಅಮೂಲ್ಯವಾದ ಮತ್ತು ಇಷ್ಟ ಸಂಪತ್ತಿನಿಂದ ಕೋಣೆಗಳು ತುಂಬಲ್ಪಡುವವು.
- 5 ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.
- 6 ಜ್ಞಾನಯುಕ್ತ ವಾದ ಆಲೋಚನೆಯಿಂದ ನಿನ್ನ ಯುದ್ಧವನ್ನು ನಡಿ ಸುತ್ತೀ; ಬಹುಮಂದಿ ಸಲಹೆಗಾರರು ಇರುವಲ್ಲಿ ಸುರ ಕ್ಷಣೆ ಇರುತ್ತದೆ.
- 7 ಜ್ಞಾನವು ಬುದ್ಧಿಹೀನನಿಗೆ ನಿಲುಕದ್ದಾ ಗಿದೆ. ದ್ವಾರದಲ್ಲಿ ಅವನು ತನ್ನ ಬಾಯಿಯನ್ನು ತೆರೆಯು ವದಿಲ್ಲ.
- 8 ಕೇಡನ್ನು ಕಲ್ಪಿಸುವವನು ಕುಚೋದ್ಯಗಾರ ನೆಂದು ಕರೆಯಲ್ಪಡುವನು.
- 9 ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
- 10 ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.
- 11 ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ
- 12 ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
- 13 ನನ್ನ ಮಗನೇ, ಜೇನು ಚೆನ್ನಾಗಿರುವದರಿಂದಲೂ ನಿನ್ನ ಬಾಯಿಗೆ ಜೇನು ತುಪ್ಪವು ಸಿಹಿಯಾಗಿರುವದರಿಂದಲೂ ಅದನ್ನು ತಿನ್ನು;
- 14 ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.
- 15 ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ;
- 16 ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
- 17 ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;
- 18 ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.
- 19 ಕೆಟ್ಟವರ ಮೇಲೆ ಉರಿಗೊಳ್ಳಬೇಡ; ಇಲ್ಲವೆ ದುಷ್ಟ ರಿಗಾಗಿ ಅಸೂಯೆಪಡಬೇಡ;
- 20 ಕೆಡುಕನಿಗೆ ಪ್ರತಿ ಫಲವು ಇರುವದಿಲ್ಲ; ದುಷ್ಟರ ದೀಪವು ಆರಿಹೋಗು ವದು.
- 21 ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.
- 22 ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು?
- 23 ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
- 24 ದುಷ್ಟನಿಗೆ--ನೀನು ನೀತಿವಂತನು ಎಂದು ಹೇಳುವವನನ್ನು ಜನರು ಶಪಿಸು ವರು, ಜನಾಂಗಗಳು ಅವನನ್ನು ಹೇಸಿಕೊಳ್ಳುವರು.
- 25 ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
- 26 ಸರಿಯಾಗಿ ಉತ್ತರಿಸುವವನ ತುಟಿಗಳನ್ನು ಪ್ರತಿ ಯೊಬ್ಬನು ಮುದ್ದಿಡುವನು.
- 27 ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.
- 28 ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.
- 29 ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.
- 30 ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;
- 31 ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು.
- 32 ಆಗ ನಾನು ನೋಡಿ ಮನಸ್ಸಿಟ್ಟೆನು; ದೃಷ್ಟಿಸಿ ಶಿಕ್ಷಿತನಾದೆನು.
- 33 ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ನಿದ್ರೆಗಾಗಿ ಇನ್ನು ಕೊಂಚ ಕೈ ಮುದುರಿ ಕೊಳ್ಳುವದು;
- 34 ಹೀಗೆ ನಿನ್ನ ಬಡತನವು ಪ್ರಯಾಣಿಕನ ಹಾಗೆಯೂ ನಿನ್ನ ಕೊರತೆಯು ಆಯುಧದಾರ ನಂತೆಯೂ ಬರುವವು.
Proverbs 24
- Details
- Parent Category: Old Testament
- Category: Proverbs
ಙ್ಞಾನೋಕ್ತಿಗಳು ಅಧ್ಯಾಯ 24